ವಿಭಾಗದ ಬಗ್ಗೆ
ಕರ್ನಾಟಕ ಅರಣ್ಯ ಇಲಾಖೆಯ ಯೋಜನಾ ಘಟಕ ಇಲಾಖೆಯ ಪ್ರಾದೇಶಿಕ ವಿಭಾಗಗಳ ಅರಣ್ಯೀಕರಣ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುತ್ತದೆ. ಇವು ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ (ವೃಕ್ಷೋದ್ಯಾನ), ದೇವರಕಾಡು (ದೈವೀವನ), ಔಷಧೀಯ ಸಸ್ಯ ಸಂರಕ್ಷಿತ ಪ್ರದೇಶಗಳು ಮತ್ತು ಔಷಧೀಯ ಸಸ್ಯ ಅಭಿವೃದ್ಧಿ ಪ್ರದೇಶಗಳ ನಿರ್ವಹಣೆ, ಸಮೃದ್ಧ ಹಸಿರು ಗ್ರಾಮ ಯೋಜನೆ, ತಾಲೂಕಿಗೊಂದು ಹಸಿರು ಗ್ರಾಮ ಯೋಜನೆ, ಗ್ರಾಮ ಅರಣ್ಯ ಸಮಿತಿಗಳ ಪುನಶ್ಚೇತನ ಯೋಜನೆ ಮುಂತಾದ ರಾಜ್ಯ ಸರ್ಕಾರದ ಯೋಜನೆಗಳಲ್ಲದೇ ಕೇಂದ್ರ ಪುರಸ್ಕೃತ ಯೋಜನೆಗಳಾದ ನಗರವನ ಉದ್ಯಾನ ಯೋಜನೆ, ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ ರವರ ಅನುದಾನಿತ ಅರಣ್ಯೀಕರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತದೆ